ಕನ್ನಡ ರಾಜ್ಯೋತ್ಸದ ಅಂಗವಾಗಿ ನವೆಂಬರ್ 1 ರಂದು ಕಡ್ಡಾಯವಾಗಿ ಕರ್ನಾಟಕದ ಧ್ವಜವನ್ನು ಹಾರಿಸಲು ಎಲ್ಲಾ ಶಿಕ್ಷಣ ಸಂಸ್ಥೆಗಳು, ಐಟಿ ಕಂಪೆನಿಗಳು ಹಾಗೂ ಕಾರ್ಖಾನೆಗಳಿಗೆ ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
PTI (ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ) ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವನಾದ ನಾನು ಎಲ್ಲಾ ಐಟಿ ಕಂಪೆನಿ, ಶಿಕ್ಷಣ ಸಂಸ್ಥೆಗಳು ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ತಮ್ಮ ತಮ್ಮ ಸಂಸ್ಥೆಗಳಲ್ಲಿ ಕನ್ನಡ ಧ್ವಜವನ್ನು ಹಾರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದರು.

ಬೆಂಗಳೂರಿನ 50 ಪ್ರತಿಶತದಷ್ಟು ಜನಸಂಖ್ಯೆಯು ಹೊರರಾಜ್ಯದಿಂದ ಬಂದವರಿಂದ ಕೂಡಿದೆ ಹಾಗಾಗಿ ನಾವು ನಮ್ಮ ಸ್ಥಳೀಯ ಆಚರಣೆಗಳನ್ನು, ಸಂಸ್ಕೃತಿಯನ್ನು ಹೆಮ್ಮೆಯಿಂದ ಬೆಳೆಸುವುದು, ಆಚರಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಹಾಗೆಯೇ ಕನ್ನಡ ಭಾಷೆಗೆ ಗೌರವವನ್ನು ಕೊಡಬೇಕು ಹಾಗೂ ಭಾಷೆಯನ್ನು ಬಳಸಲು ಉತ್ತೇಜಿಸಬೇಕೆಂದು ಸೂಚಿಸಿದರು.
ಕನ್ನಡ ಪರ ಸಂಘಟನೆಗಳು ಯಾವುದೇ ರೀತಿಯ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಎಚ್ಚರಿಸಿದರು. ಹಾಗೆಯೇ ಕಡ್ಡಾಯವಾಗಿ ಧ್ವಜಾರೋಹಣ ಮಾಡಲು ಆಜ್ಞಾಪಿಸಿದರು.
- ಬೆಟ್ಟದ ನೆಲ್ಲಿಕಾಯಿನ ಖಾಲಿ ಹೊಟ್ಟೇಲಿ ಸೇವಿಸೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.
- IPL Auction 2025: ಐಪಿಎಲ್ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ! ನಾಯಕನ ಹುಡುಕಾಟದಲ್ಲಿ ಆರ್ಸಿಬಿ!
- ನಾಳೆ ರಿಲೀಸ್ ಆಗಬೇಕಿದ್ದ ‘Nayanthara: Beyond the Fairy Tale’ ಡಾಕ್ಯುಮೆಂಟರಿಗೆ ನೈಟ್ಮೇರ್ ಆದ ನಟ ಧನುಷ್. ಧನುಷ್ಗೆ ಬಹಿರಂಗ ಪತ್ರ ಬರೆದ ನಟಿ ನಯನತಾರಾ. 10 ಕೋಟಿ ಬೇಡಿಕೆಯಿಟ್ಟ ನಟ ಧನುಷ್!
- ಭಾರತದ ISRO ಜೊತೆ ಕೈ ಜೋಡಿಸಿದ SpaceX. ಸ್ಪೇಸ್ ಎಕ್ಸ್ ನ Falcon 9 ರಾಕೆಟ್ನಲ್ಲಿ ಉಡಾವಣೆಯಾಗಲು ಸಜ್ಜಾಗಿದೆ ಭಾರತದ GSAT-20 ಉಪಗ್ರಹ!
- ಬೆಂಗಳೂರಿನಲ್ಲಿ ಓಲಾದಲ್ಲಿ ಎರಡು ಆಟೋಗಳನ್ನು ಬುಕ್ ಮಾಡಿ, ಒಂದನ್ನು ರದ್ದು ಮಾಡಿ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ!